ಶರಣ ಸಂಬಂಧವನರಿದ ಬಳಿಕ

ವಿಕಿಸೋರ್ಸ್ದಿಂದ


Pages   (key to Page Status)   

ಶರಣ ಸಂಬಂಧವನರಿದ ಬಳಿಕ ಮರಳಿ ಭವಿಯ ಬೆರಸಲಾಗದು. ಬ್ರಹ್ಮೇತಿ ಭ್ರೂಣಹತ್ಯ ವೈತರಣಿ ದುರ್ಗತಿ ಪಂಚಮಹಾಪಾತಕದಿಂದದ್ಥಿಕ ನೋಡಾ. ಅಳುಪಿ ಭವಿಯೊಡನುಂಡಡೆ ಭಕ್ತನಲ್ಲ ಕೂಡಲಸಂಗಮದೇವಾ.