ಶೂನ್ಯವ ನುಡಿದು ದುರ್ಗತಿಗಿಳಿದವರ,

ವಿಕಿಸೋರ್ಸ್ದಿಂದ



Pages   (key to Page Status)   


ಶೂನ್ಯವ ನುಡಿದು ದುರ್ಗತಿಗಿಳಿದವರ
ಅದ್ವೈತವ ನುಡಿದು ಅಹಂಕಾರಿಗಳಾದವರ
ಬ್ರಹ್ಮವ ನುಡಿದು ಭ್ರಮಿತರಾದವರ
ತ್ರಿಕಾಲ ಲಿಂಗಪೂಜೆಯ ಮಾಡದವರ ಬ್ರಹ್ಮದ ಅನವರತ ಮಾತ ಕೇಳಿ ಹಿಡಿದ ವ್ರತನೇಮಗಳ ಬಿಡುವವರ_ ಈ ದುರಾಚಾರಿಗಳ ಮೆಚ್ಚ
ಕೂಡಲಚೆನ್ನಸಂಗಾ ನಿಮ್ಮ ಶರಣ.