ಶ್ರೋತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು,
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಶ್ರೋತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ತ್ವಕ್ಕಿನಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ನೇತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ಜಿಹ್ವೆಯಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು
ನಾಸಿಕದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು. ಇಂತೀ ಪಂಚೇಂದ್ರಿಯಂಗಳಲ್ಲಿ ಬ್ರಹ್ಮಚಾರಿಯಾಗಿ
ಕೂಡಲಸಂಗಮದೇವರಲ್ಲಿ ಎನ್ನನಾಗುಮಾಡಲಿಕೆ ಬ್ರಹ್ಮಚಾರಿಯಾದರು ಪ್ರಭುದೇವರು.