ಸಮಯದಲ್ಲಿ ಸಮ್ಮತನು ಆಚಾರದ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಸಮಯದಲ್ಲಿ ಸಮ್ಮತನು ಆಚಾರದ ನೆಲೆಯನರಿದು
ಹೃದಯದ ಕತ್ತಲೆಯ ಉದಯದಲ್ಲಿಯೇ ಕಳೆದ. ಮುಟ್ಟುವುದ ಮುಟ್ಟದೆ ಕಳೆದ; ಮುಟ್ಟದುದ ಮುನ್ನವೆ ಕಳೆದ. ಅಯ್ಯಾ ಆಯ್ಯಾ ಎಂದಲ್ಲಿಯೆ ಕಲಿಯಾದ. ಕೇಸರಿಸಮ ಜೋಗ; ಐದರ ಮದಸೇನೆ ಮುರಿಯಿತ್ತು
ಎನ್ನೊಡೆಯ ಕೂಡಲಚೆನ್ನಸಂಗಯ್ಯ ಹಿಡಿವಡೆದ