ಹರಹರಾ, ಸುರಧೇನುವಿದ್ದು ಎನ್ನ
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹರಹರಾ
ಎನ್ನ ಬಡಮನದ ಅಳಿಯಾಸೆಯ ನೋಡಾ ! ಸುರಧೇನುವಿದ್ದು ಬರಡಾಕಳಿಗೆ ಆಸೆಮಾಡುವಂತೆ
ಕಲ್ಪವೃಕ್ಷವಿದ್ದು ಕಾಡಮರಕ್ಕೆ ಕೈಯಾನುವಂತೆ
ಚಿಂತಾಮಣಿಯಿದ್ದು ಗಾಜಿನಮಣಿಯ ಬಯಸುವಂತೆ
ಎನ್ನ ಕರ ಮನ ಭಾವದಲ್ಲಿ ನೀವು ಭರಿತರಾಗಿರ್ದುದ ಮರೆತು ನರರಿಗಾಸೆಯ ಮಾಡಿ ಕೆಟ್ಟೆನಯ್ಯ ಅಖಂಡೇಶ್ವರಾ.