ಹರಿ ಚಿತ್ತ ಸತ್ಯ

ವಿಕಿಸೋರ್ಸ್ದಿಂದ

ರಚನೆ: ಶ್ರೀ ಪುರಂದರದಾಸರು


ಹರಿ ಚಿತ್ತ ಸತ್ಯ ನಮ್ಮ ಹರಿ ಚಿತ್ತ ಸತ್ಯ
ನರ ಚಿತ್ತಕೆ ಬಂದದ್ದು ಲವಲೇಶ ನಡೆಯದು

ಸುದತಿ ಮಕ್ಕಳ ಭಾಗ್ಯ ಬಯಸೋದು ನರ ಚಿತ್ತ
ಮದುವ್ಯಾಗದಿರುವುದು ಹರಿ ಚಿತ್ತವಯ್ಯ

ಕುದುರೆ ಅಂದಣ ಆನೆ ಬಯಸೋದು ನರ ಚಿತ್ತ
ಪಾದಚಾರಿ ಆಗೋದು ಹರಿ ಚಿತ್ತವಯ್ಯ

ಸದಾ ಅನ್ನದಾನವ ಬಯಸೋದು ನರ ಚಿತ್ತ
ಉದರಕೆ ಅಳುವುದು ಹರಿ ಚಿತ್ತವಯ್ಯ

ಪುರಂದರ ವಿಠ್ಠಲನ ಬಯಸೋದು ನರ ಚಿತ್ತ
ದುರಿತವ ಕಳೆವುದು ಹರಿ ಚಿತ್ತವಯ್ಯ


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ