ಹಸಿವಿಲ್ಲದೆ ಉಣಬಲ್ಲಡೆ, ಉಪಾಧಿಯಿಲ್ಲದೆ

ವಿಕಿಸೋರ್ಸ್ದಿಂದ



Pages   (key to Page Status)   


ಹಸಿವಿಲ್ಲದೆ ಉಣಬಲ್ಲಡೆ
ಉಪಾಧಿಯಿಲ್ಲದೆ ಬೇಡಬಲ್ಲಡೆ
ಅದು ವರ್ಮ
ಅದು ಸಂಬಂಧ. ಗಮನವಿಲ್ಲದೆ ಸುಳಿಯಬಲ್ಲಡೆ
ನಿರ್ಗಮನಿಯಾಗಿ ನಿಲಬಲ್ಲಡೆ ಅದು ವರ್ಮ
ಅದು ಸಂಬಂಧ. ಅವರ ನಡೆ ಪಾವನ
ಅವರ ನುಡಿ ತತ್ವ
ಅವರು(ರ?) ಜಗದಾರಾಧ್ಯರೆಂಬೆ ಗುಹೇಶ್ವರಾ.