ಹಸಿವು ಹರಿದು, ತೃಷೆ

ವಿಕಿಸೋರ್ಸ್ದಿಂದ



Pages   (key to Page Status)   


ಹಸಿವು ಹರಿದು
ತೃಷೆ ಬತ್ತಿ
ಪರಿಣಾಮವೆ ಪಥ್ಯವಾಗಿ ನಿಂದಂಗ ನೀನಾದ ಕಾರಣ
ನಿನ್ನ ಕಾರುಣ್ಯಚಕ್ಷು ಎನ್ನ ನಿರೀಕ್ಷಿಸಿದಲ್ಲಿ
ಎನ್ನ ಬಂಧ ಮೋಕ್ಷವೆಂಬುವು ಅಂದೆ ನಿಂದವು. ಕೂಡಲಚೆನ್ನಸಂಗಮದೇವರಲ್ಲಿ ಪ್ರಭುದೇವರ ಸುಳುಹು ಗೋಪ್ಯವಾಯಿತ್ತು.