ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ
ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು
ಸುಜ್ಞಾನವೆಂಬ ತುಪ್ಪ
ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ. ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ
ಸಯವಪ್ಪ ಗಂಡಂಗೆ ಕೊಟ್ಟಿರಿ
ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಗತನವ ಮಾಡುವೆ. ಚೆನ್ನಮಲ್ಲಿಕಾರ್ಜುನನ ಕೈವಿಡಿದು ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ
ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು
ಶರಣಾರ್ಥಿ.